25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya
error: Content is protected !!