29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya
error: Content is protected !!