19.5 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya
error: Content is protected !!