July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya
error: Content is protected !!