23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಪ್ರಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟರವರು ಫೆ. 8 ರಂದು ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್., ತಾಲೂಕು ಆರೋಗ್ಯ ಅಧಿಕಾರಿ, ಡಾ.ಸಂಜಾತ್, ಬೆಳ್ತಂಗಡಿ ಪ.ಪಂ. ಜಯಾನಂದ ಎಂ., ಕಟ್ಟಡ ಮಾಲಕ ಉಮೇಶ್ ಎನ್. ಹೆರಾಜೆ, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಮಾಜಿ ನೋಡಲ್ ಅಧಿಕಾರಿ ಡಾ| ಅನಿಲ ದೀಪಕ್ ಶೆಟ್ಟಿ ಉಪಸ್ಥಿತರಿದ್ದರು.

ನಂತರ ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ ಕಾರ್ಯಕ್ರಮವು ಜರುಗಿತು.

ಜನೌಷಧಿ ಕೇಂದ್ರದ ಮಾಲಕರು ಶ್ರೀಮತಿ ಉಷಾ ಶ್ರೀಧರ ಭಂಡಾರಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya
error: Content is protected !!