25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯ
ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.
ಪಾದಚಾರಿ ಕಡಿರುದ್ಯಾವರದ
ಅಂತರ ಲೋಕಯ್ಯ ಗೌಡ(65) ಎಂಬವರಿಗೆ
ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು,ಗಂಭೀರವಾಗಿ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರಿಗೆ ಪತ್ನಿ,ಪುತ್ರಿ ಹಾಗೂ ಪುತ್ರ ಇದ್ದಾರೆ. ಘಟನೆ ಬಗ್ಗೆ ಬೈಕ್ ಸವಾರ ಚರಣ್ ರಾಜ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!