23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಾಡುಹಂದಿಯನ್ನು ಯಾವುದೋ ಆಯುಧಗಳಿಂದ ದಾಳಿ ಮಾಡಿದ ಪ್ರಕರಣ ಸಂಬಂಧ ವೈದ್ಯರ ವರದಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ತೋಟದಲ್ಲಿ ಒಂದು ವರ್ಷ ಪ್ರಾಯದ 26 ಕೆ‌.ಜಿ ತೂಕದ ಹೆಣ್ಣು ಕಾಡುಹಂದಿಯನ್ನು ಜ.23 ರಂದು ಜಾನು ಗೌಡ ಎಂಬಾತ ಆಯುಧದಿಂದ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದು. ಈ ಘಟನೆ ಬಗ್ಗೆ ಸ್ಥಳೀಯರು ಬೆಳ್ತಂಗಡಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಜ.23 ರಂದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಬೆಳ್ತಂಗಡಿ ಗೋ ಮತ್ತು ಪಶು ಇಲಾಖೆಯ ವೈದ್ಯರಿಂದ ಶವ ಪರೀಕ್ಷೆ ಮಾಡಿಸಿ ಯಾವ ವಸ್ತುವಿನಿಂದ ಗಾಯಗೊಳಿಸಿ ಸಾಯಿಸಲಾಗಿದೆ ಎಂದು ವರದಿ ಕೇಳಿದ್ದರು. ಈ ಬಗ್ಗೆ ಪಶು ವೈದ್ಯರು ಜ.26 ರಂದು ಅಯುಧದಿಂದ ಗಾಯಗೊಳಿಸಿ ಸಾಯಿಸಿರುವುದಾಗಿ ವರದಿ ನೀಡಿದ್ದು ಅದರಂತೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಆರೋಪಿ ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ಮಗ ಜಾನು ಗೌಡ ವಿರುದ್ಧ ಜ.27 ರಂದು ಅರಣ್ಯ ಕಾಯ್ದೆ 9,39,51 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
error: Content is protected !!