July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಾಡುಹಂದಿಯನ್ನು ಯಾವುದೋ ಆಯುಧಗಳಿಂದ ದಾಳಿ ಮಾಡಿದ ಪ್ರಕರಣ ಸಂಬಂಧ ವೈದ್ಯರ ವರದಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ತೋಟದಲ್ಲಿ ಒಂದು ವರ್ಷ ಪ್ರಾಯದ 26 ಕೆ‌.ಜಿ ತೂಕದ ಹೆಣ್ಣು ಕಾಡುಹಂದಿಯನ್ನು ಜ.23 ರಂದು ಜಾನು ಗೌಡ ಎಂಬಾತ ಆಯುಧದಿಂದ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದು. ಈ ಘಟನೆ ಬಗ್ಗೆ ಸ್ಥಳೀಯರು ಬೆಳ್ತಂಗಡಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಜ.23 ರಂದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಬೆಳ್ತಂಗಡಿ ಗೋ ಮತ್ತು ಪಶು ಇಲಾಖೆಯ ವೈದ್ಯರಿಂದ ಶವ ಪರೀಕ್ಷೆ ಮಾಡಿಸಿ ಯಾವ ವಸ್ತುವಿನಿಂದ ಗಾಯಗೊಳಿಸಿ ಸಾಯಿಸಲಾಗಿದೆ ಎಂದು ವರದಿ ಕೇಳಿದ್ದರು. ಈ ಬಗ್ಗೆ ಪಶು ವೈದ್ಯರು ಜ.26 ರಂದು ಅಯುಧದಿಂದ ಗಾಯಗೊಳಿಸಿ ಸಾಯಿಸಿರುವುದಾಗಿ ವರದಿ ನೀಡಿದ್ದು ಅದರಂತೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಆರೋಪಿ ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ಮಗ ಜಾನು ಗೌಡ ವಿರುದ್ಧ ಜ.27 ರಂದು ಅರಣ್ಯ ಕಾಯ್ದೆ 9,39,51 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!