September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

ಗುರುವಾಯನಕೆರೆ: ಭಕ್ತರ ಪಾಲಿನ ಕಾರಣಿಕ ಕ್ಷೇತ್ರವಾಗಿ, ಅಜಿಲ ಸೀಮೆಯಲ್ಲಿ ಕಲಿಯುಗದ ಕೈಲಾಸವೆಂದೇ ಹೆಗ್ಗಳಿಕೆ ಪಡೆದಿರುವ ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮದಲ್ಲಿ ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆ ನಡೆದು ಉಗ್ರಾಣ ಮುಹೂರ್ತವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರು ನೇರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಅರಮಲೆಬೆಟ್ಟ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು,
ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ನವಶಕ್ತಿ,ಬ್ರಹ್ಮಕುಂಭಾಭಿಷೇಕ ಸಮಿತಿಯ ಸಮಿತಿಯ ಕಾರ್ಯಧ್ಯಕ್ಷ ಸುಮಂತ್ ಕುಮಾರ್ ಜೈನ್, ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಭಾರತಿ ಶೆಟ್ಟಿ, ಕೈಗಾರಿಕೋದ್ಯಮಿ ದೇವೆಂದ್ರ ಹೆಗ್ಡೆ ಕೊಕ್ರಾಡಿ, ಸ್ವಸ್ತಿಕ್ ಲುಮೀನರ್ಸ್ ಮಾಲಕ ಸಂಪತ್ ಕುಮಾರ್ ಜೈನ್,ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಪಾಡ್ಯಾರು, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ವಾತ್ಸಲ್ಯ ,ಸುನೀಶ್ ಕುಮಾರ್, ಸಂತೋಷ್ ಕುಮಾರ್ ಜೈನ್ ,ರಾಜೇಶ್ ಶೆಟ್ಟಿ ನವಶಕ್ತಿ, ಉಗ್ರಾಣ ಸಮಿತಿ ಶಂಕರ್ ಗಾಣಿಗ,ಕರುಣಾಕರ ಜಿ ಕುಲಾಲ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!