25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ, ಬೆಳ್ತಂಗಡಿ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಫೆ. 9ರಂದು ಜರುಗಿತು.


ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದ್ದರು.ದಿನೇಶ್ ಕೊಯ್ಯೂರು ಸಭೆಯ ನೋಟೀಸ್ ಓದಿ ದಾಖಲಿಸಿದರು. ಕಾರ್ಯದರ್ಶಿ ಗಣೇಶ್ ಗೌಡ ವರದಿ ಮಂಡಿಸಿದರು. 2023-24ನೇ ಸಾಲಿನ ಲೆಕ್ಕಪತ್ರವನ್ನು ಯುವರಾಜ್ ಅನಾರು ಮಂಡಿಸಿದರು. ಮುಂದಿನ ವರ್ಷದ ಅಭಿವೃದ್ಧಿ ವಿಷಯಗಳ ಬಗ್ಗೆ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ನೀಡಿದ ಕಿರಣ್ ಚಂದ್ರ ಪುಷ್ಪಗಿರಿ ಹಾಗೂ ಡಾ. ರತ್ನಾ ಬೆಳಾಲು, ಪಿಹೆಚ್ ಡಿ ಪಡೆದ ಡಾ. ಶೀಲಾವತಿ ಬೆಳಾಲು , ಕಲ್ಲೇರಿ ಶಾಖೆ ಪ್ರಾರಂಭಿಸುವಲ್ಲಿ ಉಸ್ತುವಾರಿ ವಹಿಸಿದ್ದ ಯುವರಾಜ್ ಅನಾರುರವರನ್ನು ಸನ್ಮಾನಿಸಲಾಯಿತು

.ಈ ಸಂದರ್ಭ ಬೆಳಾಲು ಗ್ರಾಮ ಸಮಿತಿಯವರು ರೂ. 50,000ವನ್ನು ಕಟ್ಟಡ ನಿರ್ಮಾಣಕ್ಕೆ ನೀಡಿದರು.
ವೇದಿಕೆಯಲ್ಲಿ ಸಂಘದ ನಿರ್ದೇಶಕರು,ಮಹಿಳಾ ಸಂಘದ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಉಪಸ್ಥಿತರಿದ್ದರು.
ಪ್ರಾಪ್ತಿ, ಚಾರ್ವಿ, ಸಾನ್ವಿ, ಅದೀಕ್ಷ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ಸ್ವಾಗತಿಸಿದರು. ಶ್ರೀನಾಥ್ ಕೆ. ಎನ್. ಧನ್ಯವಾದವಿತ್ತರು. ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!