July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ, ಬೆಳ್ತಂಗಡಿ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಫೆ. 9ರಂದು ಜರುಗಿತು.


ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದ್ದರು.ದಿನೇಶ್ ಕೊಯ್ಯೂರು ಸಭೆಯ ನೋಟೀಸ್ ಓದಿ ದಾಖಲಿಸಿದರು. ಕಾರ್ಯದರ್ಶಿ ಗಣೇಶ್ ಗೌಡ ವರದಿ ಮಂಡಿಸಿದರು. 2023-24ನೇ ಸಾಲಿನ ಲೆಕ್ಕಪತ್ರವನ್ನು ಯುವರಾಜ್ ಅನಾರು ಮಂಡಿಸಿದರು. ಮುಂದಿನ ವರ್ಷದ ಅಭಿವೃದ್ಧಿ ವಿಷಯಗಳ ಬಗ್ಗೆ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ನೀಡಿದ ಕಿರಣ್ ಚಂದ್ರ ಪುಷ್ಪಗಿರಿ ಹಾಗೂ ಡಾ. ರತ್ನಾ ಬೆಳಾಲು, ಪಿಹೆಚ್ ಡಿ ಪಡೆದ ಡಾ. ಶೀಲಾವತಿ ಬೆಳಾಲು , ಕಲ್ಲೇರಿ ಶಾಖೆ ಪ್ರಾರಂಭಿಸುವಲ್ಲಿ ಉಸ್ತುವಾರಿ ವಹಿಸಿದ್ದ ಯುವರಾಜ್ ಅನಾರುರವರನ್ನು ಸನ್ಮಾನಿಸಲಾಯಿತು

.ಈ ಸಂದರ್ಭ ಬೆಳಾಲು ಗ್ರಾಮ ಸಮಿತಿಯವರು ರೂ. 50,000ವನ್ನು ಕಟ್ಟಡ ನಿರ್ಮಾಣಕ್ಕೆ ನೀಡಿದರು.
ವೇದಿಕೆಯಲ್ಲಿ ಸಂಘದ ನಿರ್ದೇಶಕರು,ಮಹಿಳಾ ಸಂಘದ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಉಪಸ್ಥಿತರಿದ್ದರು.
ಪ್ರಾಪ್ತಿ, ಚಾರ್ವಿ, ಸಾನ್ವಿ, ಅದೀಕ್ಷ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ಸ್ವಾಗತಿಸಿದರು. ಶ್ರೀನಾಥ್ ಕೆ. ಎನ್. ಧನ್ಯವಾದವಿತ್ತರು. ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya
error: Content is protected !!