24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ, ಬೆಳ್ತಂಗಡಿ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಫೆ. 9ರಂದು ಜರುಗಿತು.


ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದ್ದರು.ದಿನೇಶ್ ಕೊಯ್ಯೂರು ಸಭೆಯ ನೋಟೀಸ್ ಓದಿ ದಾಖಲಿಸಿದರು. ಕಾರ್ಯದರ್ಶಿ ಗಣೇಶ್ ಗೌಡ ವರದಿ ಮಂಡಿಸಿದರು. 2023-24ನೇ ಸಾಲಿನ ಲೆಕ್ಕಪತ್ರವನ್ನು ಯುವರಾಜ್ ಅನಾರು ಮಂಡಿಸಿದರು. ಮುಂದಿನ ವರ್ಷದ ಅಭಿವೃದ್ಧಿ ವಿಷಯಗಳ ಬಗ್ಗೆ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ನೀಡಿದ ಕಿರಣ್ ಚಂದ್ರ ಪುಷ್ಪಗಿರಿ ಹಾಗೂ ಡಾ. ರತ್ನಾ ಬೆಳಾಲು, ಪಿಹೆಚ್ ಡಿ ಪಡೆದ ಡಾ. ಶೀಲಾವತಿ ಬೆಳಾಲು , ಕಲ್ಲೇರಿ ಶಾಖೆ ಪ್ರಾರಂಭಿಸುವಲ್ಲಿ ಉಸ್ತುವಾರಿ ವಹಿಸಿದ್ದ ಯುವರಾಜ್ ಅನಾರುರವರನ್ನು ಸನ್ಮಾನಿಸಲಾಯಿತು

.ಈ ಸಂದರ್ಭ ಬೆಳಾಲು ಗ್ರಾಮ ಸಮಿತಿಯವರು ರೂ. 50,000ವನ್ನು ಕಟ್ಟಡ ನಿರ್ಮಾಣಕ್ಕೆ ನೀಡಿದರು.
ವೇದಿಕೆಯಲ್ಲಿ ಸಂಘದ ನಿರ್ದೇಶಕರು,ಮಹಿಳಾ ಸಂಘದ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಉಪಸ್ಥಿತರಿದ್ದರು.
ಪ್ರಾಪ್ತಿ, ಚಾರ್ವಿ, ಸಾನ್ವಿ, ಅದೀಕ್ಷ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ಸ್ವಾಗತಿಸಿದರು. ಶ್ರೀನಾಥ್ ಕೆ. ಎನ್. ಧನ್ಯವಾದವಿತ್ತರು. ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!