24.8 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ),ಕರ್ನಾಟಕ ನೇತ್ರಾವತಿ ವಲಯ ಪುತ್ತೂರು ತಾಲೂಕು ಹಾಗೂ ಕ್ಷೀರಸಂಗಮ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನ ಕಳಿಯ ಗೇರುಕಟ್ಟೆ ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯು ಫೆ. 9 ರಂದು ಉದ್ಘಾಟನೆಗೊಂಡಿತು.

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ಹಾಗೂ ಕ್ಷೀರಸಂಗಮ ಸಭಾಭವನದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ ದೀಪ ಬೆಳಗಿಸುವುದರೊಂದಿಗೆ ತರಗತಿಯನ್ನು ಉದ್ಘಾಟಿಸಿದರು. ಎಸ್ ಪಿ ವೈ ಎಸ್ ಎಸ್ ನ ಪುತ್ತೂರು ತಾಲೂಕಿನ ವರದಿ ಪ್ರಮುಖರಾದ ಲಕ್ಷ್ಮಿಕಾಂತ್ ಅಧ್ಯಕ್ಷತೆಯನ್ನು ವಹಿಸಿ ,ನಮ್ಮ ಜೀವನದಲ್ಲಿ ಯೋಗದ ಅಗತ್ಯದ ಬಗ್ಗೆ ತಿಳಿಸುತ್ತಾ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಲಕ್ಷ್ಮೀನಾರಾಯಣ ,ಪ್ರಾಂತ ಶಿಕ್ಷಣ ಪ್ರಮುಖರು, ಕೇಂದ್ರ ಸಮಿತಿ ತುಮಕೂರು ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸ್ಥಾಪನೆ, ಬೆಳೆದು ಬಂದ ಹಾದಿ ಹಾಗೂ ಧ್ಯೇಯೋದ್ದೇಶಗಳ ಪರಿಚಯ ಮಾಡಿ ಹೊಸ ಯೋಗ ಬಂಧುಗಳಿಗೆ ಶುಭ ಹಾರೈಸಿದರು.

ಕುಮಾರಿ ಬ್ರಾಹ್ಮಿ ಪ್ರಾರ್ಥಿಸಿದರು. ಸುಕೇಶ್ ಗೇರುಕಟ್ಟೆ ಸ್ವಾಗತಿಸಿ, ತಿಲಕ್ ಗುರುವಾಯನಕೆರೆ ವಂದಿಸಿದರು. ಶಶಿಕಲಾ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು. ಪ್ರತಿನಿತ್ಯ ಯೋಗ ತರಗತಿಯು ಮುಂಜಾನೆ 5:00ರಿಂದ 6:30ವರೆಗೆ ನಡೆಯಲಿದ್ದು ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಯೋಗ ಶಿಕ್ಷಕಿ ಶ್ರೀಮತಿ ಪ್ರೇಮಲತಾ ತಿಳಿಸಿದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!