32.3 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

ಪಡಂಗಡಿ :ಇಲ್ಲಿಯ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು(ಫೆ.10) ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಗಣಪತಿ ಹೋಮ, ಪ್ರಧಾನ ಹೋಮ ಪಂಚ ವಿಂಶತಿ ಕಲಶ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ದೈವಗಳಿಗೆ ಕಲಶಾಭಿಷೇಕ, ನಾಗದೇವರಿಗೆ ಕಲಶಾಭಿಷೇಕ ,ತಂಬಿಲ, ಪಂಚ ಪರ್ವ , ಸಾಮೂಹಿಕ ಶನಿ ಪೂಜೆ ಜರಗಿ ನಂತರ ಶ್ರೀಸದಾಶಿವ ದೇವರಿಗೆ ಮಹಾ ಪೂಜೆ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಯೋಗೀಶ್ ಕುಮಾರ್ ಕೆ.ಎಸ್. ನಡಕ್ಕರ, ಆಡಳಿತ ಮೊಕ್ತೇಸರರು ಅಮರನಾಥ ಹೆಗ್ಡೆ, ಅಧ್ಯಕ್ಷ ದೇವದಾಸ್ ಎಲ್. ಶೆಟ್ಟಿ , ಅರ್ಚಕರು ಕೆ. ರತ್ನಾಕರ ನೂರಿತ್ತಾಯ , ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ , ಕೋಶಾಧಿಕಾರಿ ಉದಯವರ್ಮ ,ಕಾರ್ಯದರ್ಶಿ ಜಗದೀಶ್ ಗೌಡ, ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಂಜೆ ಮಲ್ಲಿಪ್ಪಾಡಿ, ಶ್ರೀ ಸದಾಶಿವ ಭಜನಾ ಮಂಡಳಿ ಹಾಗು ತೆಂಕ ಕಾರಂದೂರು ಶ್ರೀ ವಿಷ್ಣು ಮೂರ್ತಿ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನಾ ಸೇವೆ, ಶ್ರೀ ದೇವರಿಗೆ ರಂಗ ಪೂಜೆ ದೇವರ ಬಲಿ, ಬಟ್ಟಲು ಕಾಣಿಕೆ, ಮೂಜಿಲ್ನಾಯ, ಪಿಲಿ ಚಾಮುಂಡಿ, ಪಂಜುರ್ಲಿ, ಭೈರವ, ಗುಳಿಗ ದೈವ ಗಳ ನೇಮೋತ್ಸವ ಜರಗಲಿದೆ.

Related posts

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!