September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

ಪಡಂಗಡಿ :ಇಲ್ಲಿಯ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು(ಫೆ.10) ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಗಣಪತಿ ಹೋಮ, ಪ್ರಧಾನ ಹೋಮ ಪಂಚ ವಿಂಶತಿ ಕಲಶ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ದೈವಗಳಿಗೆ ಕಲಶಾಭಿಷೇಕ, ನಾಗದೇವರಿಗೆ ಕಲಶಾಭಿಷೇಕ ,ತಂಬಿಲ, ಪಂಚ ಪರ್ವ , ಸಾಮೂಹಿಕ ಶನಿ ಪೂಜೆ ಜರಗಿ ನಂತರ ಶ್ರೀಸದಾಶಿವ ದೇವರಿಗೆ ಮಹಾ ಪೂಜೆ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಯೋಗೀಶ್ ಕುಮಾರ್ ಕೆ.ಎಸ್. ನಡಕ್ಕರ, ಆಡಳಿತ ಮೊಕ್ತೇಸರರು ಅಮರನಾಥ ಹೆಗ್ಡೆ, ಅಧ್ಯಕ್ಷ ದೇವದಾಸ್ ಎಲ್. ಶೆಟ್ಟಿ , ಅರ್ಚಕರು ಕೆ. ರತ್ನಾಕರ ನೂರಿತ್ತಾಯ , ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ , ಕೋಶಾಧಿಕಾರಿ ಉದಯವರ್ಮ ,ಕಾರ್ಯದರ್ಶಿ ಜಗದೀಶ್ ಗೌಡ, ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಂಜೆ ಮಲ್ಲಿಪ್ಪಾಡಿ, ಶ್ರೀ ಸದಾಶಿವ ಭಜನಾ ಮಂಡಳಿ ಹಾಗು ತೆಂಕ ಕಾರಂದೂರು ಶ್ರೀ ವಿಷ್ಣು ಮೂರ್ತಿ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನಾ ಸೇವೆ, ಶ್ರೀ ದೇವರಿಗೆ ರಂಗ ಪೂಜೆ ದೇವರ ಬಲಿ, ಬಟ್ಟಲು ಕಾಣಿಕೆ, ಮೂಜಿಲ್ನಾಯ, ಪಿಲಿ ಚಾಮುಂಡಿ, ಪಂಜುರ್ಲಿ, ಭೈರವ, ಗುಳಿಗ ದೈವ ಗಳ ನೇಮೋತ್ಸವ ಜರಗಲಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!