July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

ಉರುವಾಲು: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮವು ಜಾತ್ರೋತ್ಸವ ಕಾರ್ಯಕ್ರಮದ ಗೌರವಾಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಈ ವೇಳೆ ದೇವೇಂದ್ರ ಹೆಗ್ಡೆ ಕೊಕ್ರಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ದೇವರ ಬಿಲ್ಲೆ ಮರೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಶಂಕರ್ ನಾಯಕ್ ರೈತಬಂಧು ಆಹಾರೋದ್ಯಮ ಮಾರುತೀಪುರ ಕಣಿಯೂರು, ಮೋನಪ್ಪ ಪೂಜಾರಿ ಕಂಡೆತ್ಯಾರು ಆಡಳಿತ ಮೊಕ್ತೇಸರರು ಬಾಲಸುಬ್ರಹ್ಮಣ್ಯ ದೇವಸ್ಥಾನ ಮಡವು ಪಾಂಡವರಕಲ್ಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ ಅಣವು, ದೇವಸ್ಥಾನ ಸಹಮೋಕ್ತೇಸರರಾದ ಸೇಸಪ್ಪ ರೈ ಕೊರಿಂಜ , ಸೀತಾರಾಮ ಆಳ್ವ ಕೊರಿಂಜ‌, ಉಪಸ್ಥಿತರಿದ್ದರು.

ಯಮುನಾ ತುಂಬ್ಯ ಮತ್ತು ವೆಂಕಟ್ರಮಣ ಭಟ್ ಸರಳಿ ಇವರನ್ನು ಗೌರವಪೂರ್ವಕವಾಗಿ ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.
ಜಾತ್ರೋತ್ಸವ ಕಾರ್ಯಕ್ರಮದ ಕಾರ್ಯದರ್ಶಿ ಶ್ರೀಮತಿ ಕೇಶವತಿ ಉರುವಾಲು ಇವರ ಧನ್ಯವಾದವಿತ್ತರು.
ಮೈರೋಳ್ತಡ್ಕ ಶಾಲೆಯ ಸಹಶಿಕ್ಷಕ ಮಾಧವ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya
error: Content is protected !!