25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ),ಕರ್ನಾಟಕ ನೇತ್ರಾವತಿ ವಲಯ ಪುತ್ತೂರು ತಾಲೂಕು ಹಾಗೂ ಕ್ಷೀರಸಂಗಮ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನ ಕಳಿಯ ಗೇರುಕಟ್ಟೆ ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯು ಫೆ. 9 ರಂದು ಉದ್ಘಾಟನೆಗೊಂಡಿತು.

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ಹಾಗೂ ಕ್ಷೀರಸಂಗಮ ಸಭಾಭವನದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ ದೀಪ ಬೆಳಗಿಸುವುದರೊಂದಿಗೆ ತರಗತಿಯನ್ನು ಉದ್ಘಾಟಿಸಿದರು. ಎಸ್ ಪಿ ವೈ ಎಸ್ ಎಸ್ ನ ಪುತ್ತೂರು ತಾಲೂಕಿನ ವರದಿ ಪ್ರಮುಖರಾದ ಲಕ್ಷ್ಮಿಕಾಂತ್ ಅಧ್ಯಕ್ಷತೆಯನ್ನು ವಹಿಸಿ ,ನಮ್ಮ ಜೀವನದಲ್ಲಿ ಯೋಗದ ಅಗತ್ಯದ ಬಗ್ಗೆ ತಿಳಿಸುತ್ತಾ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಲಕ್ಷ್ಮೀನಾರಾಯಣ ,ಪ್ರಾಂತ ಶಿಕ್ಷಣ ಪ್ರಮುಖರು, ಕೇಂದ್ರ ಸಮಿತಿ ತುಮಕೂರು ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸ್ಥಾಪನೆ, ಬೆಳೆದು ಬಂದ ಹಾದಿ ಹಾಗೂ ಧ್ಯೇಯೋದ್ದೇಶಗಳ ಪರಿಚಯ ಮಾಡಿ ಹೊಸ ಯೋಗ ಬಂಧುಗಳಿಗೆ ಶುಭ ಹಾರೈಸಿದರು.

ಕುಮಾರಿ ಬ್ರಾಹ್ಮಿ ಪ್ರಾರ್ಥಿಸಿದರು. ಸುಕೇಶ್ ಗೇರುಕಟ್ಟೆ ಸ್ವಾಗತಿಸಿ, ತಿಲಕ್ ಗುರುವಾಯನಕೆರೆ ವಂದಿಸಿದರು. ಶಶಿಕಲಾ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು. ಪ್ರತಿನಿತ್ಯ ಯೋಗ ತರಗತಿಯು ಮುಂಜಾನೆ 5:00ರಿಂದ 6:30ವರೆಗೆ ನಡೆಯಲಿದ್ದು ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಯೋಗ ಶಿಕ್ಷಕಿ ಶ್ರೀಮತಿ ಪ್ರೇಮಲತಾ ತಿಳಿಸಿದರು.

Related posts

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya
error: Content is protected !!