25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ),ಕರ್ನಾಟಕ ನೇತ್ರಾವತಿ ವಲಯ ಪುತ್ತೂರು ತಾಲೂಕು ಹಾಗೂ ಕ್ಷೀರಸಂಗಮ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನ ಕಳಿಯ ಗೇರುಕಟ್ಟೆ ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯು ಫೆ. 9 ರಂದು ಉದ್ಘಾಟನೆಗೊಂಡಿತು.

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ಹಾಗೂ ಕ್ಷೀರಸಂಗಮ ಸಭಾಭವನದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ ದೀಪ ಬೆಳಗಿಸುವುದರೊಂದಿಗೆ ತರಗತಿಯನ್ನು ಉದ್ಘಾಟಿಸಿದರು. ಎಸ್ ಪಿ ವೈ ಎಸ್ ಎಸ್ ನ ಪುತ್ತೂರು ತಾಲೂಕಿನ ವರದಿ ಪ್ರಮುಖರಾದ ಲಕ್ಷ್ಮಿಕಾಂತ್ ಅಧ್ಯಕ್ಷತೆಯನ್ನು ವಹಿಸಿ ,ನಮ್ಮ ಜೀವನದಲ್ಲಿ ಯೋಗದ ಅಗತ್ಯದ ಬಗ್ಗೆ ತಿಳಿಸುತ್ತಾ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಲಕ್ಷ್ಮೀನಾರಾಯಣ ,ಪ್ರಾಂತ ಶಿಕ್ಷಣ ಪ್ರಮುಖರು, ಕೇಂದ್ರ ಸಮಿತಿ ತುಮಕೂರು ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸ್ಥಾಪನೆ, ಬೆಳೆದು ಬಂದ ಹಾದಿ ಹಾಗೂ ಧ್ಯೇಯೋದ್ದೇಶಗಳ ಪರಿಚಯ ಮಾಡಿ ಹೊಸ ಯೋಗ ಬಂಧುಗಳಿಗೆ ಶುಭ ಹಾರೈಸಿದರು.

ಕುಮಾರಿ ಬ್ರಾಹ್ಮಿ ಪ್ರಾರ್ಥಿಸಿದರು. ಸುಕೇಶ್ ಗೇರುಕಟ್ಟೆ ಸ್ವಾಗತಿಸಿ, ತಿಲಕ್ ಗುರುವಾಯನಕೆರೆ ವಂದಿಸಿದರು. ಶಶಿಕಲಾ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು. ಪ್ರತಿನಿತ್ಯ ಯೋಗ ತರಗತಿಯು ಮುಂಜಾನೆ 5:00ರಿಂದ 6:30ವರೆಗೆ ನಡೆಯಲಿದ್ದು ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಯೋಗ ಶಿಕ್ಷಕಿ ಶ್ರೀಮತಿ ಪ್ರೇಮಲತಾ ತಿಳಿಸಿದರು.

Related posts

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya
error: Content is protected !!