27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

ಪಡಂಗಡಿ :ಇಲ್ಲಿಯ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು(ಫೆ.10) ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಗಣಪತಿ ಹೋಮ, ಪ್ರಧಾನ ಹೋಮ ಪಂಚ ವಿಂಶತಿ ಕಲಶ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ದೈವಗಳಿಗೆ ಕಲಶಾಭಿಷೇಕ, ನಾಗದೇವರಿಗೆ ಕಲಶಾಭಿಷೇಕ ,ತಂಬಿಲ, ಪಂಚ ಪರ್ವ , ಸಾಮೂಹಿಕ ಶನಿ ಪೂಜೆ ಜರಗಿ ನಂತರ ಶ್ರೀಸದಾಶಿವ ದೇವರಿಗೆ ಮಹಾ ಪೂಜೆ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಯೋಗೀಶ್ ಕುಮಾರ್ ಕೆ.ಎಸ್. ನಡಕ್ಕರ, ಆಡಳಿತ ಮೊಕ್ತೇಸರರು ಅಮರನಾಥ ಹೆಗ್ಡೆ, ಅಧ್ಯಕ್ಷ ದೇವದಾಸ್ ಎಲ್. ಶೆಟ್ಟಿ , ಅರ್ಚಕರು ಕೆ. ರತ್ನಾಕರ ನೂರಿತ್ತಾಯ , ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ , ಕೋಶಾಧಿಕಾರಿ ಉದಯವರ್ಮ ,ಕಾರ್ಯದರ್ಶಿ ಜಗದೀಶ್ ಗೌಡ, ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಂಜೆ ಮಲ್ಲಿಪ್ಪಾಡಿ, ಶ್ರೀ ಸದಾಶಿವ ಭಜನಾ ಮಂಡಳಿ ಹಾಗು ತೆಂಕ ಕಾರಂದೂರು ಶ್ರೀ ವಿಷ್ಣು ಮೂರ್ತಿ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನಾ ಸೇವೆ, ಶ್ರೀ ದೇವರಿಗೆ ರಂಗ ಪೂಜೆ ದೇವರ ಬಲಿ, ಬಟ್ಟಲು ಕಾಣಿಕೆ, ಮೂಜಿಲ್ನಾಯ, ಪಿಲಿ ಚಾಮುಂಡಿ, ಪಂಜುರ್ಲಿ, ಭೈರವ, ಗುಳಿಗ ದೈವ ಗಳ ನೇಮೋತ್ಸವ ಜರಗಲಿದೆ.

Related posts

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya
error: Content is protected !!