23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಹಬಾಗಿತ್ವದಲ್ಲಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ( ಅಂದತ್ವ ನಿವಾರಣಾ ವಿಭಾಗ) ,ಶ್ರಿದೇವಿ ಆಪ್ಟಿಕಲ್ ಸಂತೆಕಟ್ಟೆ ಬೆಳ್ತಂಗಡಿ, ಶ್ರಿ ಭಗವಾನ್ ಸಾಯಿಬಾಬಾ ಪೂಜಾ ಸಾಮಾಗ್ರಿಗಳ ಮಳಿಗೆ ಸಂತೆಕಟ್ಟೆ ಇದರ ಎರಡನೇ ವರ್ಷದ ಮಳಿಗೆಯ ಪಾದಾರ್ಪಣೆ ಬಗ್ಗೆ ರಾಜಕೇಸರಿ ಸಂಘಟನೆಯ 552 ನೇ ಸೇವಾಯೋಜನೆಯ ಪ್ರಯುಕ್ತ ಸಂತೆಕಟ್ಟೆ ಒಳಾಂಗಣದಲ್ಲಿ ಫೆ.10 ರಂದು ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಬಳಂಜ ಶಿಕ್ಷಣ ಟ್ರಷ್ಟ್ ಇದರ ಅಧ್ಯಕ್ಷ ಮನೋಹರ್ ಬಳಂಜ ಉದ್ಘಾಟಿಸಿ ಮಾತನಾಡಿ ರಾಜಕೇಸರಿ ಸಂಘಟನೆಯು ಕಳೆದ ಇಪ್ಪತ್ತು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಅನಾರೋಗ್ಯ ಪೀಡಿತರಿಗೆ ನೆರವು, ನಿರಾಶ್ರಿತರಿಗೆ ಮನೆ, ಸರಕಾರಿ ಶಾಲಾ ಶೌಚಾಲಯ ಸ್ವಚ್ಚತೆ, ಸರಕಾರಿ ಶಾಲೆಗೆ ಕೊಡುಗೆ, ಉಚಿತ ಸಾಮೂಹಿಕ ವಿವಾಹ, ರಕ್ತದಾನ ಶಿಬಿರ, ಸಾದಕರನ್ನು ಗುರುತಿಸುವ ಕಾರ್ಯಕ್ರಮದೊಂದಿಗೆ ಉಚಿತ ಅರೋಗ್ಯ ಶಿಬಿರಗಳನ್ನು ಮಾಡುತ್ತಿದ್ದು ಇದೊಂದು ಸಮಾಜ ಮೆಚ್ಚುವ ಕಾರ್ಯ.ಇದರ ಸ್ಥಾಪಕಾದ್ಯಕ್ಷ ದೀಪಕ್ ಜೀ ಯವರು ತಮ್ಮ ಜೀವನವನ್ನು ಸಮಾಜಸೇವೆಗೆ ಮೀಸಲಿಟ್ಟ ಸಾಧಕರು ಎಂದರು.

ಖ್ಯಾತ ನೇತ್ರ ವೈದ್ಯ ಡಾ ಮಧುಕರ್ ಮಾತನಾಡಿ ಇಂದಿನ ಒತ್ತಡದ ಯುಗದಲ್ಲಿ ಕಣ್ಣಿನ ರಕ್ಷಣೆ ಅಗತ್ಯವಿದೆ. ಪ್ರತಿಯೊಬ್ಬರು ಸಮಯಕ್ಕೆ ಸರಿಯಾಗಿ ಕಣ್ಣಿನ ಪರೀಕ್ಷೆ ಮಾಡಬೇಕು. ಇಂದು ರಾಜಕೇಸರಿ ಸಂಘಟನೆ ಹಲವಾರು ವರ್ಷಗಳಿಂದ ಉಚಿತ ನೇತ್ರಚಿಕಿತ್ಸಾ ಶಿಬಿರ ಮಾಡಿ ಜನಸಾಮಾನ್ಯರಿಗೆ ನೆರವು ನೀಡುವ ಕಾರ್ಯ ಮಾಡುತ್ತಿದೆ ಎಂದರು.

ರಾಜಕೇಸರಿ ಸಂಘಟನೆಯ ಸಂಚಾಲಕ ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಪ್ರಾಸ್ತಾವಿಕ ಮಾತನಾಡಿದರು. ನೇತ್ರ ವೈದ್ಯರಾದ ಡಾ ಕ್ರೀನಾ, ತಾ ಪಂ ಸಂಯೋಜಕ ಜಯಾನಂದ ಲಾಯಿಲ, ಬಳಂಜ ಅಟ್ಲಾಜೆ ಸರ್ವೋದಯ ಪ್ರೆಂಡ್ಸ್ ನ ಅದ್ಯಕ್ಷ ಸುರೇಶ್ ಹೇವ, ಉದ್ಯಮಿ ಶ್ತಿಕೇಶ್ ಕೋಟ್ಯಾನ್ ಮುಂದಾದವರು ಉಪಸ್ಥಿತರಿದ್ದರು. ರಾಜಕೇಸರಿ ಸಂಘಟನೆಯ ಸಂಚಾಲಕ ಪ್ರೇಮ್ ರಾಜ್ ಸಿಕ್ವೇರಾ ಪ್ರಾಸ್ತಾವಿಕ ಮಾತನಾಡಿದರು. ಪ್ರತೀಕ್ಷಾ ದೀಪಕ್ ಜಿ ಅಥಿತಿ ಗಣ್ಯರನ್ನು ಸ್ವಾಗತಿಸಿದರು. ನೂರಕ್ಕು ಅಧಿಕ ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು

Related posts

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!