23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

ಉರುವಾಲು: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮವು ಜಾತ್ರೋತ್ಸವ ಕಾರ್ಯಕ್ರಮದ ಗೌರವಾಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಈ ವೇಳೆ ದೇವೇಂದ್ರ ಹೆಗ್ಡೆ ಕೊಕ್ರಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ದೇವರ ಬಿಲ್ಲೆ ಮರೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಶಂಕರ್ ನಾಯಕ್ ರೈತಬಂಧು ಆಹಾರೋದ್ಯಮ ಮಾರುತೀಪುರ ಕಣಿಯೂರು, ಮೋನಪ್ಪ ಪೂಜಾರಿ ಕಂಡೆತ್ಯಾರು ಆಡಳಿತ ಮೊಕ್ತೇಸರರು ಬಾಲಸುಬ್ರಹ್ಮಣ್ಯ ದೇವಸ್ಥಾನ ಮಡವು ಪಾಂಡವರಕಲ್ಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ ಅಣವು, ದೇವಸ್ಥಾನ ಸಹಮೋಕ್ತೇಸರರಾದ ಸೇಸಪ್ಪ ರೈ ಕೊರಿಂಜ , ಸೀತಾರಾಮ ಆಳ್ವ ಕೊರಿಂಜ‌, ಉಪಸ್ಥಿತರಿದ್ದರು.

ಯಮುನಾ ತುಂಬ್ಯ ಮತ್ತು ವೆಂಕಟ್ರಮಣ ಭಟ್ ಸರಳಿ ಇವರನ್ನು ಗೌರವಪೂರ್ವಕವಾಗಿ ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.
ಜಾತ್ರೋತ್ಸವ ಕಾರ್ಯಕ್ರಮದ ಕಾರ್ಯದರ್ಶಿ ಶ್ರೀಮತಿ ಕೇಶವತಿ ಉರುವಾಲು ಇವರ ಧನ್ಯವಾದವಿತ್ತರು.
ಮೈರೋಳ್ತಡ್ಕ ಶಾಲೆಯ ಸಹಶಿಕ್ಷಕ ಮಾಧವ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!