September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

ಉರುವಾಲು: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮವು ಜಾತ್ರೋತ್ಸವ ಕಾರ್ಯಕ್ರಮದ ಗೌರವಾಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಈ ವೇಳೆ ದೇವೇಂದ್ರ ಹೆಗ್ಡೆ ಕೊಕ್ರಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ದೇವರ ಬಿಲ್ಲೆ ಮರೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಶಂಕರ್ ನಾಯಕ್ ರೈತಬಂಧು ಆಹಾರೋದ್ಯಮ ಮಾರುತೀಪುರ ಕಣಿಯೂರು, ಮೋನಪ್ಪ ಪೂಜಾರಿ ಕಂಡೆತ್ಯಾರು ಆಡಳಿತ ಮೊಕ್ತೇಸರರು ಬಾಲಸುಬ್ರಹ್ಮಣ್ಯ ದೇವಸ್ಥಾನ ಮಡವು ಪಾಂಡವರಕಲ್ಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ ಅಣವು, ದೇವಸ್ಥಾನ ಸಹಮೋಕ್ತೇಸರರಾದ ಸೇಸಪ್ಪ ರೈ ಕೊರಿಂಜ , ಸೀತಾರಾಮ ಆಳ್ವ ಕೊರಿಂಜ‌, ಉಪಸ್ಥಿತರಿದ್ದರು.

ಯಮುನಾ ತುಂಬ್ಯ ಮತ್ತು ವೆಂಕಟ್ರಮಣ ಭಟ್ ಸರಳಿ ಇವರನ್ನು ಗೌರವಪೂರ್ವಕವಾಗಿ ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.
ಜಾತ್ರೋತ್ಸವ ಕಾರ್ಯಕ್ರಮದ ಕಾರ್ಯದರ್ಶಿ ಶ್ರೀಮತಿ ಕೇಶವತಿ ಉರುವಾಲು ಇವರ ಧನ್ಯವಾದವಿತ್ತರು.
ಮೈರೋಳ್ತಡ್ಕ ಶಾಲೆಯ ಸಹಶಿಕ್ಷಕ ಮಾಧವ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ – ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya
error: Content is protected !!