July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ),ಕರ್ನಾಟಕ ನೇತ್ರಾವತಿ ವಲಯ ಪುತ್ತೂರು ತಾಲೂಕು ಹಾಗೂ ಕ್ಷೀರಸಂಗಮ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನ ಕಳಿಯ ಗೇರುಕಟ್ಟೆ ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯು ಫೆ. 9 ರಂದು ಉದ್ಘಾಟನೆಗೊಂಡಿತು.

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ಹಾಗೂ ಕ್ಷೀರಸಂಗಮ ಸಭಾಭವನದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ ದೀಪ ಬೆಳಗಿಸುವುದರೊಂದಿಗೆ ತರಗತಿಯನ್ನು ಉದ್ಘಾಟಿಸಿದರು. ಎಸ್ ಪಿ ವೈ ಎಸ್ ಎಸ್ ನ ಪುತ್ತೂರು ತಾಲೂಕಿನ ವರದಿ ಪ್ರಮುಖರಾದ ಲಕ್ಷ್ಮಿಕಾಂತ್ ಅಧ್ಯಕ್ಷತೆಯನ್ನು ವಹಿಸಿ ,ನಮ್ಮ ಜೀವನದಲ್ಲಿ ಯೋಗದ ಅಗತ್ಯದ ಬಗ್ಗೆ ತಿಳಿಸುತ್ತಾ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಲಕ್ಷ್ಮೀನಾರಾಯಣ ,ಪ್ರಾಂತ ಶಿಕ್ಷಣ ಪ್ರಮುಖರು, ಕೇಂದ್ರ ಸಮಿತಿ ತುಮಕೂರು ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸ್ಥಾಪನೆ, ಬೆಳೆದು ಬಂದ ಹಾದಿ ಹಾಗೂ ಧ್ಯೇಯೋದ್ದೇಶಗಳ ಪರಿಚಯ ಮಾಡಿ ಹೊಸ ಯೋಗ ಬಂಧುಗಳಿಗೆ ಶುಭ ಹಾರೈಸಿದರು.

ಕುಮಾರಿ ಬ್ರಾಹ್ಮಿ ಪ್ರಾರ್ಥಿಸಿದರು. ಸುಕೇಶ್ ಗೇರುಕಟ್ಟೆ ಸ್ವಾಗತಿಸಿ, ತಿಲಕ್ ಗುರುವಾಯನಕೆರೆ ವಂದಿಸಿದರು. ಶಶಿಕಲಾ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು. ಪ್ರತಿನಿತ್ಯ ಯೋಗ ತರಗತಿಯು ಮುಂಜಾನೆ 5:00ರಿಂದ 6:30ವರೆಗೆ ನಡೆಯಲಿದ್ದು ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಯೋಗ ಶಿಕ್ಷಕಿ ಶ್ರೀಮತಿ ಪ್ರೇಮಲತಾ ತಿಳಿಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya
error: Content is protected !!