25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ),ಕರ್ನಾಟಕ ನೇತ್ರಾವತಿ ವಲಯ ಪುತ್ತೂರು ತಾಲೂಕು ಹಾಗೂ ಕ್ಷೀರಸಂಗಮ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನ ಕಳಿಯ ಗೇರುಕಟ್ಟೆ ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯು ಫೆ. 9 ರಂದು ಉದ್ಘಾಟನೆಗೊಂಡಿತು.

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ಹಾಗೂ ಕ್ಷೀರಸಂಗಮ ಸಭಾಭವನದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ ದೀಪ ಬೆಳಗಿಸುವುದರೊಂದಿಗೆ ತರಗತಿಯನ್ನು ಉದ್ಘಾಟಿಸಿದರು. ಎಸ್ ಪಿ ವೈ ಎಸ್ ಎಸ್ ನ ಪುತ್ತೂರು ತಾಲೂಕಿನ ವರದಿ ಪ್ರಮುಖರಾದ ಲಕ್ಷ್ಮಿಕಾಂತ್ ಅಧ್ಯಕ್ಷತೆಯನ್ನು ವಹಿಸಿ ,ನಮ್ಮ ಜೀವನದಲ್ಲಿ ಯೋಗದ ಅಗತ್ಯದ ಬಗ್ಗೆ ತಿಳಿಸುತ್ತಾ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಲಕ್ಷ್ಮೀನಾರಾಯಣ ,ಪ್ರಾಂತ ಶಿಕ್ಷಣ ಪ್ರಮುಖರು, ಕೇಂದ್ರ ಸಮಿತಿ ತುಮಕೂರು ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸ್ಥಾಪನೆ, ಬೆಳೆದು ಬಂದ ಹಾದಿ ಹಾಗೂ ಧ್ಯೇಯೋದ್ದೇಶಗಳ ಪರಿಚಯ ಮಾಡಿ ಹೊಸ ಯೋಗ ಬಂಧುಗಳಿಗೆ ಶುಭ ಹಾರೈಸಿದರು.

ಕುಮಾರಿ ಬ್ರಾಹ್ಮಿ ಪ್ರಾರ್ಥಿಸಿದರು. ಸುಕೇಶ್ ಗೇರುಕಟ್ಟೆ ಸ್ವಾಗತಿಸಿ, ತಿಲಕ್ ಗುರುವಾಯನಕೆರೆ ವಂದಿಸಿದರು. ಶಶಿಕಲಾ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು. ಪ್ರತಿನಿತ್ಯ ಯೋಗ ತರಗತಿಯು ಮುಂಜಾನೆ 5:00ರಿಂದ 6:30ವರೆಗೆ ನಡೆಯಲಿದ್ದು ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಯೋಗ ಶಿಕ್ಷಕಿ ಶ್ರೀಮತಿ ಪ್ರೇಮಲತಾ ತಿಳಿಸಿದರು.

Related posts

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಕಿರಣ್ ಚಂದ್ರ ಪುಷ್ಪಗಿರಿ ರವರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya
error: Content is protected !!