April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

ಕನ್ಯಾಡಿ II: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.07 ರಂದು ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚನೆ ಮಾಡಲಾಯಿತು.

18 ಪೋಷಕ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯ ಅಧ್ಯಕ್ಷರಾಗಿ ಎರಡನೆಯ ಬಾರಿಗೆ ಕೆ ನಂದ, ಉಪಾಧ್ಯಕ್ಷರಾಗಿ ಶ್ರೀಮತಿ ಚಂದ್ರಾವತಿ ಆಯ್ಕೆಯಾಗಿರುತ್ತಾರೆ.

ಸಮಿತಿಯ ರಚನೆಯನ್ನು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಮತ್ತು ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸುವರ್ಣ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ , ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು. ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕರಾದ ಶ್ರೀಮತಿ ರಾಜಿ ಸಿ ಕೆ ವಂದಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!