September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya
error: Content is protected !!