July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!