September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಫೆ.11 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ ಕಾರ್ಯಕ್ರಮ, ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಮತ್ತು ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಲವೀನಾ ನೊರೊನ್ಹ-ಮುಖ್ಯ ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಮುಲ್ಕಿ, ಡಾ.ನಫೀಸಾ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ವಾಮದಪದವು, ಡಾ.ಶಶಿಕಲಾ-ದಂತ ಆರೋಗ್ಯ ವೈದ್ಯಾಧಿಕಾರಿ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಡಾ.ತುಷಾರ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

60ಕ್ಕೂ ಹೆಚ್ಚು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ವಿಜಯಕುಮಾರ್ ಆಪ್ತಸಮಾಲೋಚಕರು ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಿಯೋನ್ ಅಶ್ರಮದ ವೈದ್ಯರಾದ ಡಾ.ಶಿವಾನಂದ ಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya
error: Content is protected !!