23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಫೆ.11 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ ಕಾರ್ಯಕ್ರಮ, ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಮತ್ತು ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಲವೀನಾ ನೊರೊನ್ಹ-ಮುಖ್ಯ ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಮುಲ್ಕಿ, ಡಾ.ನಫೀಸಾ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ವಾಮದಪದವು, ಡಾ.ಶಶಿಕಲಾ-ದಂತ ಆರೋಗ್ಯ ವೈದ್ಯಾಧಿಕಾರಿ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಡಾ.ತುಷಾರ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

60ಕ್ಕೂ ಹೆಚ್ಚು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ವಿಜಯಕುಮಾರ್ ಆಪ್ತಸಮಾಲೋಚಕರು ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಿಯೋನ್ ಅಶ್ರಮದ ವೈದ್ಯರಾದ ಡಾ.ಶಿವಾನಂದ ಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya
error: Content is protected !!