24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.11ರಂದು ನಾರಾವಿ ಕಾಶಿಮಠ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಜೋಸೆಫ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಪಂಚಾಯತ್‌ ಸದಸ್ಯರುಗಳಾದ ಶ್ರೀಮತಿ ಯಶೋಧ, ಸಂತೋಷ್, ನಾರಾಯಣ, ಶ್ರೀಮತಿ ಸರಿತಾ, ಶ್ರೀಮತಿ ಮೀನಾ, ವಸಂತ, ಶ್ರೀಮತಿ ಮಲ್ಲಿಕಾ, ಶ್ರೀಮತಿ ಮಮತಾ ಎ.ಜಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಯೋಗಿನಿ ಶೆಟ್ಟಿ ಅನುಪಾಲನ ವರದಿ, ಪಂಚಾಯತ್ ಸಿಬ್ಬಂದಿ ಸಂತೋಷ್ ವಾರ್ಡ್ ಸಭೆಯ ಬೇಡಿಕೆ, ಬಿಲ್ ಕಲೆಕ್ಟರ್ ಸತೀಶ್ ಜಮಾ ಖರ್ಚುಗಳ ವಿವರಗಳನ್ನು ವಾಚಿಸಿದರು. ಗ್ರಾ.ಪಂ. ಸದಸ್ಯ ಉದಯ ಹೆಗ್ಡೆ ವಂದಿಸಿದರು.

Related posts

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya
error: Content is protected !!