July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.11ರಂದು ನಾರಾವಿ ಕಾಶಿಮಠ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಜೋಸೆಫ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಪಂಚಾಯತ್‌ ಸದಸ್ಯರುಗಳಾದ ಶ್ರೀಮತಿ ಯಶೋಧ, ಸಂತೋಷ್, ನಾರಾಯಣ, ಶ್ರೀಮತಿ ಸರಿತಾ, ಶ್ರೀಮತಿ ಮೀನಾ, ವಸಂತ, ಶ್ರೀಮತಿ ಮಲ್ಲಿಕಾ, ಶ್ರೀಮತಿ ಮಮತಾ ಎ.ಜಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಯೋಗಿನಿ ಶೆಟ್ಟಿ ಅನುಪಾಲನ ವರದಿ, ಪಂಚಾಯತ್ ಸಿಬ್ಬಂದಿ ಸಂತೋಷ್ ವಾರ್ಡ್ ಸಭೆಯ ಬೇಡಿಕೆ, ಬಿಲ್ ಕಲೆಕ್ಟರ್ ಸತೀಶ್ ಜಮಾ ಖರ್ಚುಗಳ ವಿವರಗಳನ್ನು ವಾಚಿಸಿದರು. ಗ್ರಾ.ಪಂ. ಸದಸ್ಯ ಉದಯ ಹೆಗ್ಡೆ ವಂದಿಸಿದರು.

Related posts

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!