April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಆನಂದೋತ್ಸವ ಶಿಬಿರ’ ಎಂಬ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಫೆ. 19ರಿಂದ 24ರ ವರೆಗೆ ಸಂಜೆ 6 ರಿಂದ 8.30 ರ ವರೆಗೆ ‘ಅರಿಪ್ಪಾಡಿ ಮಠ ಸಭಾಂಗಣ ಉಜಿರೆ ‘ ಇಲ್ಲಿ ಏರ್ಪಡಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತಿಳಿಸಿದೆ.

ಕಾರ್ಯಕ್ರಮವು ಸುದರ್ಶನ ಕ್ರಿಯೆ ಎಂಬ ಒಂದು ಲಯಬದ್ದ ಉಸಿರಾಟದ ಕಾರ್ಯಕ್ರಮವಾಗಿದ್ದು, ದೇಹದ ಆರೋಗ್ಯ ವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಪ್ರಪಂಚದ ಎಲ್ಲ ಕಡೆ ಮೂರುವರೆ ಕೋಟಿಗೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದಿದ್ದಾರೆ. 180 ಕ್ಕೂ ಹೆಚ್ಚು ದೇಶಗಳಲ್ಲಿ ಜೀವನ ಕಲೆ ಪ್ರತಿಷ್ಠಾನ ಜನಪ್ರಿಯತೆಯನ್ನು ಗಳಿಸಿದೆ.
ಅಮೆರಿಕದಲ್ಲಿ ನೂರಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳಲ್ಲಿ ಇದನ್ನು ಪಠ್ಯ ಕ್ರಮವಾಗಿ ಅಳವಡಿಸಲಾಗಿದೆ. ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಜನರ ಒತ್ತಡ ಭರಿತ ಜೀವನ ಕ್ರಮವನ್ನು ಬದಲಾಯಿಸಿ ಪ್ರಶಾಂತ ಮನಸ್ಸನ್ನು ಕಂಡುಕೊಳ್ಳಲು ನೇರವಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯು ಆಶಯ ವ್ಯಕ್ತಪಡಿಸಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ :9743642012

Related posts

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya
error: Content is protected !!