25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ವತಿಯಿಂದ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೆಳಾಲು ಅನಂತೋಡಿಯಲ್ಲಿ ನಾಲ್ಕೂವರೆ ಎಕರೆ ಗದ್ದೆಯಲ್ಲಿ 1000 ಕ್ಕೂ ಹೆಚ್ಚು ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ನಾಟಿ ಮಾಡಿದ ಕಾರ್ಯಕ್ರಮ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ.

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಘಟನೆಯೊಂದು ಸಮಾಜಮುಖಿಯಾಗಿ, ಬಡವರ ಪಾಲಿನ ಬೆಳಕಾಗಿ, ಪ್ರವಾಹದ ಸಮಯದಲ್ಲಿ ಮನೆ ಕಳೆದುಕೊಂಡ ವ್ಯಕ್ತಿಗಳಿಗೆ ಮನೆ ಹಾಗೂ ಕೃಷಿ ಪುನರ್ ನಿರ್ಮಾಣ, ಸರಕಾರಿ ಶಾಲೆಯ ಮೂಲಭೂತ ಸೌಕರ್ಯದ ಅಭಿವೃದ್ಧಿ, ಭತ್ತದ ಬೆಳೆ ಬೆಳೆಯುವಲ್ಲಿ ಜಾಗೃತಿ, ಆರ್ಥಿಕವಾಗಿ ಹಿಂದುಳಿದ ಕ್ರೀಡಾ ಪಟುಗಳಿಗೆ ಆಧುನಿಕ ಸೌಲಭ್ಯ ಸೇರಿದಂತೆ ಎಲ್ಲಾ ವಿಧದ ನೆರವು ನೀಡುತ್ತಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್ ಅವರ ಪ್ರೇರಣೆಯಿಂದ ನಮ್ಮ ಬದುಕು ಕಟ್ಟೋಣ ಬನ್ನಿ ತಂಡ ಸಮಾಜಮುಖಿ ಕೆಲಸ ನಿರ್ವಹಿಸುತ್ತಿದೆ. ಪ್ರಶಸ್ತಿ ಸನ್ಮಾನಗಳು ಕಾರ್ಯಕರ್ತರಿಗೆ ಸಂದ ಗೌರವವಾಗಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ತಿಳಿಸಿದರು.

Related posts

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya
error: Content is protected !!