20 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ವತಿಯಿಂದ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೆಳಾಲು ಅನಂತೋಡಿಯಲ್ಲಿ ನಾಲ್ಕೂವರೆ ಎಕರೆ ಗದ್ದೆಯಲ್ಲಿ 1000 ಕ್ಕೂ ಹೆಚ್ಚು ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ನಾಟಿ ಮಾಡಿದ ಕಾರ್ಯಕ್ರಮ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ.

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಘಟನೆಯೊಂದು ಸಮಾಜಮುಖಿಯಾಗಿ, ಬಡವರ ಪಾಲಿನ ಬೆಳಕಾಗಿ, ಪ್ರವಾಹದ ಸಮಯದಲ್ಲಿ ಮನೆ ಕಳೆದುಕೊಂಡ ವ್ಯಕ್ತಿಗಳಿಗೆ ಮನೆ ಹಾಗೂ ಕೃಷಿ ಪುನರ್ ನಿರ್ಮಾಣ, ಸರಕಾರಿ ಶಾಲೆಯ ಮೂಲಭೂತ ಸೌಕರ್ಯದ ಅಭಿವೃದ್ಧಿ, ಭತ್ತದ ಬೆಳೆ ಬೆಳೆಯುವಲ್ಲಿ ಜಾಗೃತಿ, ಆರ್ಥಿಕವಾಗಿ ಹಿಂದುಳಿದ ಕ್ರೀಡಾ ಪಟುಗಳಿಗೆ ಆಧುನಿಕ ಸೌಲಭ್ಯ ಸೇರಿದಂತೆ ಎಲ್ಲಾ ವಿಧದ ನೆರವು ನೀಡುತ್ತಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್ ಅವರ ಪ್ರೇರಣೆಯಿಂದ ನಮ್ಮ ಬದುಕು ಕಟ್ಟೋಣ ಬನ್ನಿ ತಂಡ ಸಮಾಜಮುಖಿ ಕೆಲಸ ನಿರ್ವಹಿಸುತ್ತಿದೆ. ಪ್ರಶಸ್ತಿ ಸನ್ಮಾನಗಳು ಕಾರ್ಯಕರ್ತರಿಗೆ ಸಂದ ಗೌರವವಾಗಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ತಿಳಿಸಿದರು.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya
error: Content is protected !!