25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

ಬೆಳ್ತಂಗಡಿ : ಮನೆಯಲ್ಲಿ‌ ನಡೆದ ಸಣ್ಣ ಗಲಾಟೆಯಿಂದ ನೊಂದು ಬೆಂಗಳೂರಿನಿಂದ ಬಸ್ ಮೂಲಕ ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಲು ಮುಂದಾದ ಮಹಿಳೆಯನ್ನು ಧರ್ಮಸ್ಥಳ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಹೋಗಿ ಮಹಿಳೆಯನ್ನು ರಕ್ಷಣೆ ಮಾಡಿದ ಘಟನೆ ಫೆ.10 ರಂದು ರಾತ್ರಿ ನಡೆದಿದೆ.

ಬೆಂಗಳೂರು ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಅನ್ನಪೂರ್ಣ (50) ಎಂಬಾಕ್ಕೆ ತನ್ನ ಮನೆಯಲ್ಲಿ ನಡೆದ ಸಣ್ಣ ಗಲಾಟೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಫೆ.10 ರಂದು ಬೆಳಗ್ಗೆ ಬಸ್ ಮೂಲಕ ಧರ್ಮಸ್ಥಳಕ್ಕೆ ರಾತ್ರಿ ಬಂದಿದ್ದು ನಂತರ ಮಗ ಚಿಕ್ಕಜಾಲ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಮೊಬೈಲ್ ಲೋಕೇಷನ್ ಮೂಲಕ ಮಹಿಳೆ ಧರ್ಮಸ್ಥಳದಲ್ಲಿರುವುದು ಕಂಡು ಬಂದಿದೆ ತಕ್ಷಣ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿ ಲೊಕೇಷನ್ ಕಳುಹಿಸಿದ್ದರು. ಕಿಶೋರ್ ಕುಮಾರ್ ಕರ್ತವ್ಯ ಬಿಟ್ಟು ಫೆ.10 ರಂದು ರಾತ್ರಿ ಮನೆಗೆ ಹೋಗಿದ್ದರು. ತಕ್ಷಣ ಠಾಣೆಯ ಕೆಲ ಸಿಬ್ಬಂದಿಗಳನ್ನು ವಿವಿಧೆಡೆ ಹುಡುಕಾಟ ನಡೆಸಲು ಕಳುಹಿಸಿದ್ದರು. ಅದಲ್ಲದೆ ಸಬ್ ಇನ್ಸ್ಪೆಕ್ಟರ್ ಮಾಫ್ತಿಯಲ್ಲಿ ಧರ್ಮಸ್ಥಳ ಸುತ್ತಮುತ್ತ ನಡೆದುಕೊಂಡು ಹೋಗಿ ಮಹಿಳೆಗಾಗಿ ಹುಡುಕಾಟ ‌ನಡೆಸಿದಾಗ ರಾತ್ರಿ ಸುಮಾರು 10:30 ಕ್ಕೆ ಧರ್ಮಸ್ಥಳ ದ್ವಾರದ ಬಳಿ ಪತ್ತೆಯಾಗಿದ್ದಾರೆ.

ಮಹಿಳೆಯನ್ನು ರಕ್ಷಣೆ‌ ಮಾಡಿ ಅವರನ್ನು ಸಮಾಧಾನ ಮಾಡಿ ನೀರು, ಊಟ ತೆಗೆಸಿಕೊಟ್ಟು ನೇರ ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆತಂದು ವಿಶಾಂತ್ರಿ ಮಾಡಿಸಿ ಕುಟುಂಬದವರಿಗೆ ಕರೆ ಮಾಡಿ ರಾತ್ರಿಯೇ ಕರೆಸಿ ಅವರೊಂದಿಗೆ ಕಳುಹಿಸಿಕೊಟ್ಟು ಸಬ್ ಇನ್ಸ್ಪೆಕ್ಟರ್ ಮಾನವೀಯತೆ ಮೆರೆದಿದ್ದಾರೆ.

ಈ ಘಟನೆ ಬಗ್ಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದ ಮಹಿಳೆಯ ಬಳಿ ವರದಿಗಾರರು ಸಂಪರ್ಕ ಮಾಡಿ ಮಾಹಿತಿ ಕೇಳಿದಾಗ ನನಗೆ ಗಲಾಟೆಯಿಂದ ನೊಂದು ನೇರ ಬಸ್ ನಲ್ಲಿ ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದೆ ಅವಾಗ ಸಬ್ ಇನ್ಸ್ಪೆಕ್ಟರ್ ಒಬ್ರು ಬಂದು ರಕ್ಷಣೆ ಮಾಡಿ ಊಟ ಮಾಡಿಸಿದ್ದಾರೆ. ನೋವಿನಿಂದ ಈಗ ಜಾಸ್ತಿ ಮಾತಾನಾಡಲು ಅಗುತ್ತಿಲ್ಲ. ಮನೆಯವರು ಬಂದ ಮೇಲೆ ಅವರೊಂದಿಗೆ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

Related posts

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya
error: Content is protected !!