ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

ಬೆಳ್ತಂಗಡಿ: ಜಗತ್ತಿನ ಶ್ರೇಷ್ಠ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಪೆನ್ಸಿಲ್ವೇನಿಯ ಯುನಿರ್ವಸಿಟಿಯ 12 ಮಂದಿ ವಿದ್ಯಾರ್ಥಿಗಳ ತಂಡವು ಯುನಿರ್ವಸಿಟಿಯ ಹಿರಿಯ ಪ್ರೊಫೆಸರ್ ಫೆಮಿದಹ್ಯಾಂಡಿ ಮತ್ತು ನಿಟ್ಟೆಯ ವಿನೋದ್ ದೀಕ್ಷಿತ್ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಭೇಟಿ ನೀಡಿ ಅಧ್ಯಯನ ನಡೆಸಿದರು.

ಮೊದಲ ದಿನ ಪ್ರಗತಿಬಂಧು ಸಂಘ, ಮಹಿಳಾ ಸ್ವಸಹಾಯ ಸಂಘ, ಮಾದರಿ ಕೃಷಿಕರು, ಒಕ್ಕೂಟ ವ್ಯವಸ್ಥೆ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಬಗ್ಗೆ ಉಡುಪಿ ತಾಲೂಕಿನಲ್ಲಿ ಅಧ್ಯಯನ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಎರಡನೇ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ). ಇದರ ಅಧ್ಯಕ್ಷ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರಾದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರನ್ನು ಭೇಟಿ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಯ ಪ್ರಸ್ತುತ ಕಾರ್ಯಕ್ರಮಗಳ ಬಗ್ಗೆ ಮಾರ್ಗದರ್ಶನ ಪಡೆದುಕೊಂಡರು.

ನಂತರ ಯೋಜನೆಯ ಕೇಂದ್ರ ಕಛೇರಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಂದ ಯೋಜನೆಯಲ್ಲಿರುವ ವಿವಿಧ ಕಾರ್ಯಕ್ರಮಗಳು, ಯೋಜನೆಯು ಗ್ರಾಮೀಣಭಿವೃದ್ಧಿಯಲ್ಲಿ ಯಾವ ರೀತಿ ಮಹತ್ವದ ಪಾತ್ರ ವಹಿಸಿದೆ. ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಿಂದ ಗ್ರಾಮಗಳಲ್ಲಾದ ಬದಲಾವಣೆಯ ಬಗ್ಗೆ ಹಾಗೂ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಲ್ಲಿ ಯೋಜನೆಯು ನೀಡಿದ ಕೊಡುಗೆಯ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು ಮತ್ತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದರು. ನಂತರ ಉಗ್ರಾಣ ಕಾರ್ ಮ್ಯುಸಿಯಂ ಭೇಟಿ ನೀಡಿದ ತಂಡಕ್ಕೆ ಕ್ಷೇಮವನದ ಸಿಇಒ ಶ್ರೀಮತಿ ಶ್ರದ್ಧಾ ಅಮಿತ್ ಇವರು ಸೂಕ್ತ ವಿವರಣೆಯೊಂದಿಗೆ ಮಾಹಿತಿ ನೀಡಿದರು. ತಂಡದ ನಿರ್ವಹಣೆಯನ್ನು ಮಾನವ ಸಂಪನ್ಮೂಲ ವಿಭಾಗದ ಯೋಜನಾಧಿಕಾರಿ ಶ್ರೀನಿವಾಸ.ಪಿ ನಡೆಸಿದರು.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಆ.2 : ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು 2026

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya
error: Content is protected !!