20 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

ಬೆಳ್ತಂಗಡಿ : ಹೊಸ ಬೆಳಕು ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 45 ಸದಸ್ಯರಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿಯನ್ನು ಫೆ.09ರಂದು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಹೊಸ ಬೆಳಕು ಒಕ್ಕೂಟದ ಗೌರವಾಧ್ಯಕ್ಷ ವಂದನೀಯ ಫಾದರ್ ವಾಲ್ಟರ್ ಡಿಮೆಲ್ಲೊ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ ಕೃಷಿ ಬೆಳೆಯಲ್ಲಿ ಅನೇಕ ಮಿಶ್ರ ಕೃಷಿಯನ್ನು ಮಾಡಿದಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಅಡಿಕೆ ಬೆಳೆ ರೋಗಗಳಿಂದ ನಶಿಸುವ ಈ ಸಂದರ್ಭದಲ್ಲಿ ಪರ್ಯಾಯ ಕೃಷಿಯನ್ನು ಮಾಡಿ ಲಾಭಾಂಶ ಮಾಡಿ ಉತ್ತಮ ಜೀವನ ಮಾಡಬಹುದು ಎಂದರು. ಹಾಗಾಗಿ ಇಂದಿನ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ ನಿಮಗೆ ಉಪಯುಕ್ತವಾಗಲಿ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸುಲೇಮಾನ್ ಬೆಳಾಲು ಅವರು, ಅಣಬೆ ಕೃಷಿ ಮಾಡುವಬಗ್ಗೆ ಪಾತ್ರ್ಯಕ್ಷತೆ ತೋರಿಸಿ ಅಣಬೆ ಕೃಷಿಯ ಉತ್ತಮ ತರಬೇತಿಯನ್ನು ನೀಡಿದರು.


ಮುಖ್ಯ ಅತಿಥಿಗಳಾಗಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ವಂದನೀಯ ಫಾ| ಕ್ಲಿಫರ್ಡ್ ಪಿಂಟೋ ರವರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್ ಹಾಗೂ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೊ ಒಕ್ಕೂಟ ಅಧ್ಯಕ್ಷ ವಿನ್ಸೆಂಟ್ ಲೋಬೋ, ಕಾರ್ಯದರ್ಶಿ ಪೌಲಿನ್ ರೇಗೊ ಉಪಸ್ಥಿತರಿದ್ದರು.

ಪ್ರಭಾಕರ್ ಮಲ್ಯ ಮಲ್ಲಿಗೆ ಕೃಷಿ ಹೇಗೆ ಮಾಡಬೇಕು, ಅದರಿಂದ ಹೇಗೆ ಲಾಭ ಪಡೆಯುವುದು ಇದರ ಬಗ್ಗೆ ಮಾಹಿತಿ ನೀಡಿದರು. ನಂತರ ಜಿಲ್ಲಾ ಕೃಷಿ ಕೇಂದ್ರದ ಅಧಿಕಾರಿ ಗಣೇಶ್ ಭಟ್ಟ ಕೃಷಿ ತರಬೇತಿ ಕೇಂದ್ರದಿಂದ ಅನೇಕ ಜನರಿಗೆ ಅನೇಕ ಕೃಷಿ ತರಬೇತಿಗಳನ್ನು ಕೊಟ್ಟು ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಮಾರ್ಗದರ್ಶನವನ್ನು ನೀಡಿದರು.


ವಾಲ್ಟರ್ ಮೋನಿಸ್ ಕಾರ್ಯಕ್ರಮ ನಿರೂಪಿಸಿ , ಒಕ್ಕೂಟ ಅಧ್ಯಕ್ಷ ವಿನ್ಸೆಂಟ್ ಲೋಬೊ ಸ್ವಾಗತಿಸಿದರು. ಒಕ್ಕೂಟ ಕಾರ್ಯದರ್ಶಿ ಶ್ರೀಮತಿ ಪೌಲಿನ್ ರೇಗೊ ಧನ್ಯವಾದವಿತ್ತರು.

Related posts

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!