29.8 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

ಬೆಳ್ತಂಗಡಿ : ಹೊಸ ಬೆಳಕು ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 45 ಸದಸ್ಯರಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿಯನ್ನು ಫೆ.09ರಂದು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಹೊಸ ಬೆಳಕು ಒಕ್ಕೂಟದ ಗೌರವಾಧ್ಯಕ್ಷ ವಂದನೀಯ ಫಾದರ್ ವಾಲ್ಟರ್ ಡಿಮೆಲ್ಲೊ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ ಕೃಷಿ ಬೆಳೆಯಲ್ಲಿ ಅನೇಕ ಮಿಶ್ರ ಕೃಷಿಯನ್ನು ಮಾಡಿದಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಅಡಿಕೆ ಬೆಳೆ ರೋಗಗಳಿಂದ ನಶಿಸುವ ಈ ಸಂದರ್ಭದಲ್ಲಿ ಪರ್ಯಾಯ ಕೃಷಿಯನ್ನು ಮಾಡಿ ಲಾಭಾಂಶ ಮಾಡಿ ಉತ್ತಮ ಜೀವನ ಮಾಡಬಹುದು ಎಂದರು. ಹಾಗಾಗಿ ಇಂದಿನ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ ನಿಮಗೆ ಉಪಯುಕ್ತವಾಗಲಿ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸುಲೇಮಾನ್ ಬೆಳಾಲು ಅವರು, ಅಣಬೆ ಕೃಷಿ ಮಾಡುವಬಗ್ಗೆ ಪಾತ್ರ್ಯಕ್ಷತೆ ತೋರಿಸಿ ಅಣಬೆ ಕೃಷಿಯ ಉತ್ತಮ ತರಬೇತಿಯನ್ನು ನೀಡಿದರು.


ಮುಖ್ಯ ಅತಿಥಿಗಳಾಗಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ವಂದನೀಯ ಫಾ| ಕ್ಲಿಫರ್ಡ್ ಪಿಂಟೋ ರವರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್ ಹಾಗೂ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೊ ಒಕ್ಕೂಟ ಅಧ್ಯಕ್ಷ ವಿನ್ಸೆಂಟ್ ಲೋಬೋ, ಕಾರ್ಯದರ್ಶಿ ಪೌಲಿನ್ ರೇಗೊ ಉಪಸ್ಥಿತರಿದ್ದರು.

ಪ್ರಭಾಕರ್ ಮಲ್ಯ ಮಲ್ಲಿಗೆ ಕೃಷಿ ಹೇಗೆ ಮಾಡಬೇಕು, ಅದರಿಂದ ಹೇಗೆ ಲಾಭ ಪಡೆಯುವುದು ಇದರ ಬಗ್ಗೆ ಮಾಹಿತಿ ನೀಡಿದರು. ನಂತರ ಜಿಲ್ಲಾ ಕೃಷಿ ಕೇಂದ್ರದ ಅಧಿಕಾರಿ ಗಣೇಶ್ ಭಟ್ಟ ಕೃಷಿ ತರಬೇತಿ ಕೇಂದ್ರದಿಂದ ಅನೇಕ ಜನರಿಗೆ ಅನೇಕ ಕೃಷಿ ತರಬೇತಿಗಳನ್ನು ಕೊಟ್ಟು ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಮಾರ್ಗದರ್ಶನವನ್ನು ನೀಡಿದರು.


ವಾಲ್ಟರ್ ಮೋನಿಸ್ ಕಾರ್ಯಕ್ರಮ ನಿರೂಪಿಸಿ , ಒಕ್ಕೂಟ ಅಧ್ಯಕ್ಷ ವಿನ್ಸೆಂಟ್ ಲೋಬೊ ಸ್ವಾಗತಿಸಿದರು. ಒಕ್ಕೂಟ ಕಾರ್ಯದರ್ಶಿ ಶ್ರೀಮತಿ ಪೌಲಿನ್ ರೇಗೊ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya
error: Content is protected !!