25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

ಬೆಳ್ತಂಗಡಿ : ಹೊಸ ಬೆಳಕು ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 45 ಸದಸ್ಯರಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿಯನ್ನು ಫೆ.09ರಂದು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಹೊಸ ಬೆಳಕು ಒಕ್ಕೂಟದ ಗೌರವಾಧ್ಯಕ್ಷ ವಂದನೀಯ ಫಾದರ್ ವಾಲ್ಟರ್ ಡಿಮೆಲ್ಲೊ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ ಕೃಷಿ ಬೆಳೆಯಲ್ಲಿ ಅನೇಕ ಮಿಶ್ರ ಕೃಷಿಯನ್ನು ಮಾಡಿದಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಅಡಿಕೆ ಬೆಳೆ ರೋಗಗಳಿಂದ ನಶಿಸುವ ಈ ಸಂದರ್ಭದಲ್ಲಿ ಪರ್ಯಾಯ ಕೃಷಿಯನ್ನು ಮಾಡಿ ಲಾಭಾಂಶ ಮಾಡಿ ಉತ್ತಮ ಜೀವನ ಮಾಡಬಹುದು ಎಂದರು. ಹಾಗಾಗಿ ಇಂದಿನ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ ನಿಮಗೆ ಉಪಯುಕ್ತವಾಗಲಿ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸುಲೇಮಾನ್ ಬೆಳಾಲು ಅವರು, ಅಣಬೆ ಕೃಷಿ ಮಾಡುವಬಗ್ಗೆ ಪಾತ್ರ್ಯಕ್ಷತೆ ತೋರಿಸಿ ಅಣಬೆ ಕೃಷಿಯ ಉತ್ತಮ ತರಬೇತಿಯನ್ನು ನೀಡಿದರು.


ಮುಖ್ಯ ಅತಿಥಿಗಳಾಗಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ವಂದನೀಯ ಫಾ| ಕ್ಲಿಫರ್ಡ್ ಪಿಂಟೋ ರವರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್ ಹಾಗೂ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೊ ಒಕ್ಕೂಟ ಅಧ್ಯಕ್ಷ ವಿನ್ಸೆಂಟ್ ಲೋಬೋ, ಕಾರ್ಯದರ್ಶಿ ಪೌಲಿನ್ ರೇಗೊ ಉಪಸ್ಥಿತರಿದ್ದರು.

ಪ್ರಭಾಕರ್ ಮಲ್ಯ ಮಲ್ಲಿಗೆ ಕೃಷಿ ಹೇಗೆ ಮಾಡಬೇಕು, ಅದರಿಂದ ಹೇಗೆ ಲಾಭ ಪಡೆಯುವುದು ಇದರ ಬಗ್ಗೆ ಮಾಹಿತಿ ನೀಡಿದರು. ನಂತರ ಜಿಲ್ಲಾ ಕೃಷಿ ಕೇಂದ್ರದ ಅಧಿಕಾರಿ ಗಣೇಶ್ ಭಟ್ಟ ಕೃಷಿ ತರಬೇತಿ ಕೇಂದ್ರದಿಂದ ಅನೇಕ ಜನರಿಗೆ ಅನೇಕ ಕೃಷಿ ತರಬೇತಿಗಳನ್ನು ಕೊಟ್ಟು ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಮಾರ್ಗದರ್ಶನವನ್ನು ನೀಡಿದರು.


ವಾಲ್ಟರ್ ಮೋನಿಸ್ ಕಾರ್ಯಕ್ರಮ ನಿರೂಪಿಸಿ , ಒಕ್ಕೂಟ ಅಧ್ಯಕ್ಷ ವಿನ್ಸೆಂಟ್ ಲೋಬೊ ಸ್ವಾಗತಿಸಿದರು. ಒಕ್ಕೂಟ ಕಾರ್ಯದರ್ಶಿ ಶ್ರೀಮತಿ ಪೌಲಿನ್ ರೇಗೊ ಧನ್ಯವಾದವಿತ್ತರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya
error: Content is protected !!