September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿ ಇದೇ ಮೊದಲ ಬಾರಿಗೆ ಮಕ್ಕಳ ಸೃಜನಶೀಲತೆ ಪ್ರತಿಭೆ ಹಾಗೂ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಫೆ.10 ರಂದು ಕಲಾ ಹಬ್ಬವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಚಾಲಕರಾದ ವಂದನೀಯ ಫಾ| ಅಬೆಲ್ ಲೋಬೋ ಹಾಗೂ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಚಾಲಕರು ಕಲೆಯು ಮಕ್ಕಳಲ್ಲಿ ಅಭಿರುಚಿಯನ್ನು ಬೆಳೆಸುತ್ತದೆ ಅದನ್ನು ಪೋಷಿಸುವ ಕಾರ್ಯ ನಮ್ಮ ಶಿಕ್ಷಣ ಸಂಸ್ಥೆಯಿಂದ ಆಗುತ್ತಿದೆ. ಮಕ್ಕಳ ಕಲಾ ಪ್ರತಿಭೆಗೆ ವೇದಿಕೆಯನ್ನು ಸಲ್ಲಿಸಿದ ಎಲ್ಲರಿಗೂ ಅಭಿನಂದನೆಯನ್ನು ಸಲ್ಲಿಸಿದರು.

ನಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ರಚಿಸಿದ ಚಿತ್ರಕಲೆ ಹಾಗೂ ಕರಕುಶಲ ಪ್ರದರ್ಶನವನ್ನು ಅನುಗ್ರಹ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಈ ಚಿತ್ರಕಲೆ ಹಾಗೂ ಕರಕುಶಲತೆಯನ್ನು ವೀಕ್ಷಿಸಿದರು. ಕಲಾ ಶಿಕ್ಷಕಿಯರಾದ ಶ್ರೀಮತಿ ಸುಮನ ಹಾಗೂ ಶ್ರೀಮತಿ ಗ್ಲೋರಿಯಾ ಇವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ವಿದ್ಯಾರ್ಥಿ ಸಾಯಿಶ್‌ ರಾಜ್ ಕಾರ್ಯಕ್ರಮದ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿನಿ ಕುಮಾರಿ ಸರಸ್ವತಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya
error: Content is protected !!