22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

ಕನ್ಯಾಡಿ II: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.07 ರಂದು ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚನೆ ಮಾಡಲಾಯಿತು.

18 ಪೋಷಕ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯ ಅಧ್ಯಕ್ಷರಾಗಿ ಎರಡನೆಯ ಬಾರಿಗೆ ಕೆ ನಂದ, ಉಪಾಧ್ಯಕ್ಷರಾಗಿ ಶ್ರೀಮತಿ ಚಂದ್ರಾವತಿ ಆಯ್ಕೆಯಾಗಿರುತ್ತಾರೆ.

ಸಮಿತಿಯ ರಚನೆಯನ್ನು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಮತ್ತು ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸುವರ್ಣ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ , ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು. ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕರಾದ ಶ್ರೀಮತಿ ರಾಜಿ ಸಿ ಕೆ ವಂದಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!