37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಫೆ.11 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ ಕಾರ್ಯಕ್ರಮ, ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಮತ್ತು ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಲವೀನಾ ನೊರೊನ್ಹ-ಮುಖ್ಯ ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಮುಲ್ಕಿ, ಡಾ.ನಫೀಸಾ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ವಾಮದಪದವು, ಡಾ.ಶಶಿಕಲಾ-ದಂತ ಆರೋಗ್ಯ ವೈದ್ಯಾಧಿಕಾರಿ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಡಾ.ತುಷಾರ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

60ಕ್ಕೂ ಹೆಚ್ಚು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ವಿಜಯಕುಮಾರ್ ಆಪ್ತಸಮಾಲೋಚಕರು ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಿಯೋನ್ ಅಶ್ರಮದ ವೈದ್ಯರಾದ ಡಾ.ಶಿವಾನಂದ ಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya
error: Content is protected !!