23.2 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಫೆ.11 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ ಕಾರ್ಯಕ್ರಮ, ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಮತ್ತು ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಲವೀನಾ ನೊರೊನ್ಹ-ಮುಖ್ಯ ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಮುಲ್ಕಿ, ಡಾ.ನಫೀಸಾ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ವಾಮದಪದವು, ಡಾ.ಶಶಿಕಲಾ-ದಂತ ಆರೋಗ್ಯ ವೈದ್ಯಾಧಿಕಾರಿ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಡಾ.ತುಷಾರ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

60ಕ್ಕೂ ಹೆಚ್ಚು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ವಿಜಯಕುಮಾರ್ ಆಪ್ತಸಮಾಲೋಚಕರು ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಿಯೋನ್ ಅಶ್ರಮದ ವೈದ್ಯರಾದ ಡಾ.ಶಿವಾನಂದ ಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya
error: Content is protected !!