23.2 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.11ರಂದು ನಾರಾವಿ ಕಾಶಿಮಠ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಜೋಸೆಫ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಪಂಚಾಯತ್‌ ಸದಸ್ಯರುಗಳಾದ ಶ್ರೀಮತಿ ಯಶೋಧ, ಸಂತೋಷ್, ನಾರಾಯಣ, ಶ್ರೀಮತಿ ಸರಿತಾ, ಶ್ರೀಮತಿ ಮೀನಾ, ವಸಂತ, ಶ್ರೀಮತಿ ಮಲ್ಲಿಕಾ, ಶ್ರೀಮತಿ ಮಮತಾ ಎ.ಜಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಯೋಗಿನಿ ಶೆಟ್ಟಿ ಅನುಪಾಲನ ವರದಿ, ಪಂಚಾಯತ್ ಸಿಬ್ಬಂದಿ ಸಂತೋಷ್ ವಾರ್ಡ್ ಸಭೆಯ ಬೇಡಿಕೆ, ಬಿಲ್ ಕಲೆಕ್ಟರ್ ಸತೀಶ್ ಜಮಾ ಖರ್ಚುಗಳ ವಿವರಗಳನ್ನು ವಾಚಿಸಿದರು. ಗ್ರಾ.ಪಂ. ಸದಸ್ಯ ಉದಯ ಹೆಗ್ಡೆ ವಂದಿಸಿದರು.

Related posts

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya
error: Content is protected !!