September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.11ರಂದು ನಾರಾವಿ ಕಾಶಿಮಠ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಜೋಸೆಫ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಪಂಚಾಯತ್‌ ಸದಸ್ಯರುಗಳಾದ ಶ್ರೀಮತಿ ಯಶೋಧ, ಸಂತೋಷ್, ನಾರಾಯಣ, ಶ್ರೀಮತಿ ಸರಿತಾ, ಶ್ರೀಮತಿ ಮೀನಾ, ವಸಂತ, ಶ್ರೀಮತಿ ಮಲ್ಲಿಕಾ, ಶ್ರೀಮತಿ ಮಮತಾ ಎ.ಜಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಯೋಗಿನಿ ಶೆಟ್ಟಿ ಅನುಪಾಲನ ವರದಿ, ಪಂಚಾಯತ್ ಸಿಬ್ಬಂದಿ ಸಂತೋಷ್ ವಾರ್ಡ್ ಸಭೆಯ ಬೇಡಿಕೆ, ಬಿಲ್ ಕಲೆಕ್ಟರ್ ಸತೀಶ್ ಜಮಾ ಖರ್ಚುಗಳ ವಿವರಗಳನ್ನು ವಾಚಿಸಿದರು. ಗ್ರಾ.ಪಂ. ಸದಸ್ಯ ಉದಯ ಹೆಗ್ಡೆ ವಂದಿಸಿದರು.

Related posts

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!