September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

ಗೇರುಕಟ್ಟೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಳ ಇಲ್ಲಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ ಫೆ.9 ರಂದು ನಡೆಯಿತು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿಕಿರಣ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ವಸಂತ ರಾಯಿಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಗುರುವಾಯನಕೆರೆ ವಲಯ ಸಿ ಆರ್ ಪಿ ರಾಜೇಶ್, ಹಳೆವಿದ್ಯಾರ್ಥಿ ಸಂಘದ ಧ್ಯೇಯ, ಉದ್ದೇಶಗಳು, ಕಾರ್ಯನಿರ್ವಹಿಸಬೇಕಾದ ಬಗ್ಗೆ ಮಾಹಿತಿ ನೀಡಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ರೀತಾ ಚಂದ್ರಶೇಖರ್ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳಾದ ರಾಜೇಶ್ ಪೆಂರ್ಬುಡ, ನಾಸೀರುದ್ದೀನ್ ಜಾರಿಗೆಬೈಲು, ದಿವ್ಯಾ ನಾಳ ಶಾಲಾ ದಿನಗಳ ಮೆಲುಕು ಹಾಕಿದರು.


ಈ ಸಂದರ್ಭದಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ರಾಜೇಶ್ ಪೆಂರ್ಬುಡ ಅವರನ್ನು ಆಯ್ಕೆಮಾಡಲಾಯಿತು.


ಉಪಾಧ್ಯಕ್ಷರಾಗಿ ಅಬ್ದುಲ್ ರಫೀಕ್ ಜಾರಿಗೆಬೈಲು, ಕಾರ್ಯದರ್ಶಿಯಾಗಿ ಗಣೇಶ್ ಬಿ. ನಾಳ, ಜತೆಕಾರ್ಯದರ್ಶಿಯಾಗಿ ದಿವ್ಯಾ ನಾಳ, ಕೋಶಾಧಿಕಾರಿಯಾಗಿ ಸಂದೀಪ್ ಗಾಣಿಗ ನಾಳ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರವಿಕಿರಣ್, ಸೋಮಣ್ಣ ಗೌಡ ಕುಬಾಯ, ನಾಸೀರುದ್ದೀನ್ ಜಾರಿಗೆಬೈಲು, ಜಯಚಂದ್ರ ಗಂಪದಕೋಡಿ, ಸಮಿತಾ ನಾಳ, ಶಶಿಕಲಾ ನಾಳ, ಗೌರವ ಸಲಹೆಗಾರರಾಗಿ ವಸಂತ‌ ಮಜಲು, ಸುಧಾಕರ ಮಜಲು, ಅಬ್ದುಲ್ ಲತೀಫ್ ಪರಿಮ, ಕೇಶವ ಪೂಜಾರಿ ನಾಳ, ಅಶೋಕ ಆಚಾರ್ಯ ಗಂಪದಕೋಡಿ, ವಸಂತ ರಾಯಿಮಾರ್ ಅವರನ್ನು ಆಯ್ಕೆ ಮಾಡಲಾಯಿತು.


ಹರಿಶ್ಚಂದ್ರ ಗಂಪದಕೋಡಿ, ಶೋಭಾ ಆಚಾರ್ಯ ನಾಳ, ರಾಜೇಂದ್ರ ಮಡಿವಾಳ, ಇದ್ದರು. ಸಹಶಿಕ್ಷಕಿ ಕವಿತಾ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ರೋನಾಲ್ಡ್ ಪಿಲೀಫ್ ಡಿಮೆಲ್ಲೋ ಪ್ರಾಸ್ತಪಿಸಿ , ವಂದಿಸಿದರು. ಸಹಶಿಕ್ಷಕಿ ದಮಯಂತಿ ಕಾರ್ಯಕ್ರಮ ‌ನಿರೂಪಿಸಿದರು.

Related posts

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!