24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಆನಂದೋತ್ಸವ ಶಿಬಿರ’ ಎಂಬ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಫೆ. 19ರಿಂದ 24ರ ವರೆಗೆ ಸಂಜೆ 6 ರಿಂದ 8.30 ರ ವರೆಗೆ ‘ಅರಿಪ್ಪಾಡಿ ಮಠ ಸಭಾಂಗಣ ಉಜಿರೆ ‘ ಇಲ್ಲಿ ಏರ್ಪಡಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತಿಳಿಸಿದೆ.

ಕಾರ್ಯಕ್ರಮವು ಸುದರ್ಶನ ಕ್ರಿಯೆ ಎಂಬ ಒಂದು ಲಯಬದ್ದ ಉಸಿರಾಟದ ಕಾರ್ಯಕ್ರಮವಾಗಿದ್ದು, ದೇಹದ ಆರೋಗ್ಯ ವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಪ್ರಪಂಚದ ಎಲ್ಲ ಕಡೆ ಮೂರುವರೆ ಕೋಟಿಗೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದಿದ್ದಾರೆ. 180 ಕ್ಕೂ ಹೆಚ್ಚು ದೇಶಗಳಲ್ಲಿ ಜೀವನ ಕಲೆ ಪ್ರತಿಷ್ಠಾನ ಜನಪ್ರಿಯತೆಯನ್ನು ಗಳಿಸಿದೆ.
ಅಮೆರಿಕದಲ್ಲಿ ನೂರಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳಲ್ಲಿ ಇದನ್ನು ಪಠ್ಯ ಕ್ರಮವಾಗಿ ಅಳವಡಿಸಲಾಗಿದೆ. ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಜನರ ಒತ್ತಡ ಭರಿತ ಜೀವನ ಕ್ರಮವನ್ನು ಬದಲಾಯಿಸಿ ಪ್ರಶಾಂತ ಮನಸ್ಸನ್ನು ಕಂಡುಕೊಳ್ಳಲು ನೇರವಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯು ಆಶಯ ವ್ಯಕ್ತಪಡಿಸಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ :9743642012

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!