July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಆನಂದೋತ್ಸವ ಶಿಬಿರ’ ಎಂಬ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಫೆ. 19ರಿಂದ 24ರ ವರೆಗೆ ಸಂಜೆ 6 ರಿಂದ 8.30 ರ ವರೆಗೆ ‘ಅರಿಪ್ಪಾಡಿ ಮಠ ಸಭಾಂಗಣ ಉಜಿರೆ ‘ ಇಲ್ಲಿ ಏರ್ಪಡಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತಿಳಿಸಿದೆ.

ಕಾರ್ಯಕ್ರಮವು ಸುದರ್ಶನ ಕ್ರಿಯೆ ಎಂಬ ಒಂದು ಲಯಬದ್ದ ಉಸಿರಾಟದ ಕಾರ್ಯಕ್ರಮವಾಗಿದ್ದು, ದೇಹದ ಆರೋಗ್ಯ ವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಪ್ರಪಂಚದ ಎಲ್ಲ ಕಡೆ ಮೂರುವರೆ ಕೋಟಿಗೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದಿದ್ದಾರೆ. 180 ಕ್ಕೂ ಹೆಚ್ಚು ದೇಶಗಳಲ್ಲಿ ಜೀವನ ಕಲೆ ಪ್ರತಿಷ್ಠಾನ ಜನಪ್ರಿಯತೆಯನ್ನು ಗಳಿಸಿದೆ.
ಅಮೆರಿಕದಲ್ಲಿ ನೂರಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳಲ್ಲಿ ಇದನ್ನು ಪಠ್ಯ ಕ್ರಮವಾಗಿ ಅಳವಡಿಸಲಾಗಿದೆ. ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಜನರ ಒತ್ತಡ ಭರಿತ ಜೀವನ ಕ್ರಮವನ್ನು ಬದಲಾಯಿಸಿ ಪ್ರಶಾಂತ ಮನಸ್ಸನ್ನು ಕಂಡುಕೊಳ್ಳಲು ನೇರವಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯು ಆಶಯ ವ್ಯಕ್ತಪಡಿಸಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ :9743642012

Related posts

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!