30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಆನಂದೋತ್ಸವ ಶಿಬಿರ’ ಎಂಬ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಫೆ. 19ರಿಂದ 24ರ ವರೆಗೆ ಸಂಜೆ 6 ರಿಂದ 8.30 ರ ವರೆಗೆ ‘ಅರಿಪ್ಪಾಡಿ ಮಠ ಸಭಾಂಗಣ ಉಜಿರೆ ‘ ಇಲ್ಲಿ ಏರ್ಪಡಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತಿಳಿಸಿದೆ.

ಕಾರ್ಯಕ್ರಮವು ಸುದರ್ಶನ ಕ್ರಿಯೆ ಎಂಬ ಒಂದು ಲಯಬದ್ದ ಉಸಿರಾಟದ ಕಾರ್ಯಕ್ರಮವಾಗಿದ್ದು, ದೇಹದ ಆರೋಗ್ಯ ವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಪ್ರಪಂಚದ ಎಲ್ಲ ಕಡೆ ಮೂರುವರೆ ಕೋಟಿಗೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದಿದ್ದಾರೆ. 180 ಕ್ಕೂ ಹೆಚ್ಚು ದೇಶಗಳಲ್ಲಿ ಜೀವನ ಕಲೆ ಪ್ರತಿಷ್ಠಾನ ಜನಪ್ರಿಯತೆಯನ್ನು ಗಳಿಸಿದೆ.
ಅಮೆರಿಕದಲ್ಲಿ ನೂರಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳಲ್ಲಿ ಇದನ್ನು ಪಠ್ಯ ಕ್ರಮವಾಗಿ ಅಳವಡಿಸಲಾಗಿದೆ. ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಜನರ ಒತ್ತಡ ಭರಿತ ಜೀವನ ಕ್ರಮವನ್ನು ಬದಲಾಯಿಸಿ ಪ್ರಶಾಂತ ಮನಸ್ಸನ್ನು ಕಂಡುಕೊಳ್ಳಲು ನೇರವಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯು ಆಶಯ ವ್ಯಕ್ತಪಡಿಸಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ :9743642012

Related posts

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya
error: Content is protected !!