37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ವತಿಯಿಂದ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೆಳಾಲು ಅನಂತೋಡಿಯಲ್ಲಿ ನಾಲ್ಕೂವರೆ ಎಕರೆ ಗದ್ದೆಯಲ್ಲಿ 1000 ಕ್ಕೂ ಹೆಚ್ಚು ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ನಾಟಿ ಮಾಡಿದ ಕಾರ್ಯಕ್ರಮ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ.

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಘಟನೆಯೊಂದು ಸಮಾಜಮುಖಿಯಾಗಿ, ಬಡವರ ಪಾಲಿನ ಬೆಳಕಾಗಿ, ಪ್ರವಾಹದ ಸಮಯದಲ್ಲಿ ಮನೆ ಕಳೆದುಕೊಂಡ ವ್ಯಕ್ತಿಗಳಿಗೆ ಮನೆ ಹಾಗೂ ಕೃಷಿ ಪುನರ್ ನಿರ್ಮಾಣ, ಸರಕಾರಿ ಶಾಲೆಯ ಮೂಲಭೂತ ಸೌಕರ್ಯದ ಅಭಿವೃದ್ಧಿ, ಭತ್ತದ ಬೆಳೆ ಬೆಳೆಯುವಲ್ಲಿ ಜಾಗೃತಿ, ಆರ್ಥಿಕವಾಗಿ ಹಿಂದುಳಿದ ಕ್ರೀಡಾ ಪಟುಗಳಿಗೆ ಆಧುನಿಕ ಸೌಲಭ್ಯ ಸೇರಿದಂತೆ ಎಲ್ಲಾ ವಿಧದ ನೆರವು ನೀಡುತ್ತಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್ ಅವರ ಪ್ರೇರಣೆಯಿಂದ ನಮ್ಮ ಬದುಕು ಕಟ್ಟೋಣ ಬನ್ನಿ ತಂಡ ಸಮಾಜಮುಖಿ ಕೆಲಸ ನಿರ್ವಹಿಸುತ್ತಿದೆ. ಪ್ರಶಸ್ತಿ ಸನ್ಮಾನಗಳು ಕಾರ್ಯಕರ್ತರಿಗೆ ಸಂದ ಗೌರವವಾಗಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ತಿಳಿಸಿದರು.

Related posts

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya
error: Content is protected !!